ಇಫ್ತಾರ್ ಕೂಟದಲ್ಲಿ ಕ್ಯಾಪ್ ಹಾಕಿಕೊಂಡವರೆಲ್ಲಾ ಮುಸಲ್ಮಾನರಿಗೆ ಹಾಕಿದ್ದೂ ಟೋಪಿಯನ್ನೇ ಮಿಸ್ಟರ್ ನಿತೀಶ್ಕುಮಾರ್!
- ಪ್ರತಾಪ್ ಸಿಂಹ ಬೆತ್ತಲೆ ಪ್ರಪಂಚ ಟೋಪಿ ಔರ್ ತಿಲಕ್! ಕಳೆದ ಏಪ್ರಿಲ್ನಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಯವರನ್ನು ಪರೋಕ್ಷವಾಗಿ ಕುಟುಕುತ್ತಾ, "ಕಭಿ ಟೋಪಿ ಭಿ ಪಹನ್ನಾ ಪಡ್ತಾ ಹೈ, ಕಭಿ ಟಿಕಾ ಭಿ ಲಗಾನಾ ಪಡ್ತಾ ಹೈ", ಅಂದರೆ ಕೆಲವೊಮ್ಮೆ ಟೋಪಿಯನ್ನೂ(ಮುಸಲ್ಮಾನರ) ಹಾಕಬೇಕಾಗುತ್ತದೆ, ತಿಲಕವನ್ನೂ(ಹಿಂದುಗಳ) ಇಟ್ಟುಕೊಳ್ಳಬೇಕಾಗುತ್ತದೆ ಎಂದಾಗಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರರ ನಿಜ ಬಣ್ಣ, ಉದ್ದೇಶ ಬಯಲಾಗಿತ್ತು. ಮುಂದುವರೆದು, "ಕೇವಲ್ ಹವಾ ಬನಾನೆ ಸೆ ಕುಛ್ ನಹೀ ಹೋಗಾ" ಎಂದಾಗಲಂತೂ ಅವರು ನರೇಂದ್ರ ಮೋದಿಯವರ ಬಗ್ಗೆ ಮತ್ಸರ ಹೊಂದಿದ್ದಾರೆ ಮಾತ್ರವಲ್ಲ, ಸ್ವತಃ ಪ್ರಧಾನಿಯಾಗ ಬೇಕೇಂಬ ಮಹತ್ವಾಕಾಂಕ್ಷೆಯನ್ನೂ ಹೊಂದಿದ್ದಾರೆ ಎಂಬುದೂ ಸ್ಪಷ್ಟವಾಗಿ ಗೋಚರಿಸಿತ್ತು. ಹೀಗಾಗಿ... ಗೋವಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ನರೇಂದ್ರ ಮೋದಿಯವರನ್ನು ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥರನ್ನಾಗಿ ಮಾಡಿದಾಗ, "ಅದು ಬಿಜೆಪಿಯ ಆಂತರಿಕ ವಿಚಾರ" ಎಂದು ಪ್ರಾರಂಭದಲ್ಲಿ ಹೇಳಿದ್ದ ಜೆಡಿಯು, ಆಡ್ವಾಣಿ ಪ್ರಹಸನ ಹಾಗೂ ಕುಮ್ಮಕ್ಕಿನ ನಂತರ ಮತ್ತೆ ಮೋದಿ ವಿಚಾರದಲ್ಲಿ ತಗಾದೆ ತೆಗೆದು 17 ವರ್ಷಗಳ ಮೈತ್ರಿಯನ್ನೇ ಮುರಿದು ಹೊರ ನಡೆದಿದೆ. ಆದರೆ ಈ ನಿತೀಶ್ಕುಮಾರರ ಮಾತು ನಡತೆಗಳ ಹಿಂದಿನ ಉದ್ದೇಶ, ಅರ್ಥವಾದರೂ ಏನು? 2003ರಲ್ಲಿ ಗುಜರಾತ್ ಮುಖ್ಯಮಂತ್ರಿಯನ್...