Thanks To News13. http://news13.in/2013/07/34450/ ಕಾರ್ಗಿಲ್ ಕದನ. ಅದೊಂದು ಭಾರತದ ಇತಿಹಾಸದಲ್ಲಿ ಮರೆಯಲಾರದ ಯುದ್ಧ. ಭಾರತ-ಪಾಕಿಸ್ತಾನಗಳ ನಡುವೆ ನಡೆದ ನಾಲ್ಕನೇ ಯುದ್ಧ. ಉಭಯ ದೇಶಗಳ ನಡುವೆ ಸುಧಾರಿಸಲಾರದಷ್ಟು ಸಂಬಂಧ ಹಳಸಿದೆ ಎನ್ನುವುದಕ್ಕೆ ಈ ಯುದ್ಧಗಳು ನಿದರ್ಶನ. ಮುಂದಿನ ಪೀಳಿಗೆ ನಮ್ಮ ಚರಿತ್ರೆಯ ಪುಟಗಳನ್ನು ತಿರುವಿ ಈ ಯುದ್ಧದ ವಿವರಗಳನ್ನು ತಿಳಿದುಕೊಳ್ಳಲು ಆಸಕ್ತಿ ತೋರಬಹುದು. ಏಕೆಂದರೆ ಈ ಯುದ್ಧ ಅಷ್ಟು ರೋಚಕವಾಗಿತ್ತು. ಶ್ರೀನಗರದಿಂದ 205 ಕಿ.ಮೀ. ದೂರದಲ್ಲಿರುವ ಕಾರ್ಗಿಲ್ ಈ ಹಿಂದೆ ಒಂದು ಜಿಲ್ಲಾಕೇಂದ್ರದ ಹೆಸರಾಗಿ ಉಳಿದಿತ್ತು. ದೇಶವಾಸಿಗಳಿಗೆ ಆ ಹೆಸರು ಅಷ್ಟೇನೂ ಪರಿಚಿತವಾಗಿರಲಿಲ್ಲ. ಆದರೆ ಈಗ ಕಾರ್ಗಿಲ್ ಎಂದ ಕೂಡಲೇ ದೇಶವಾಸಿಗಳ ನರನಾಡಿಗಳಲ್ಲಿ ಅದೇನೋ ಅವ್ಯಕ್ತ ಭಾವನೆಗಳ ಸಂಚಾರವಾಗುತ್ತದೆ. ಹಲವು ತೆರನಾದ ಭಾವನೆಗಳು ಉಕ್ಕಿ ಹರಿಯುತ್ತವೆ. ವಂಚನೆ, ಉದ್ವಿಗ್ನತೆ, ಕೋಪ, ದುಃಖ, ನಿರ್ಧಾರ, ಸಾಹಸ, ಪರಾಕ್ರಮ, ವಿಜಯ, ಸಂಭ್ರಮ – ಹೀಗೆ ಹತ್ತು ಹಲವು ಭಾವನೆಗಳು ಅನುರಣಿಸುತ್ತವೆ. 1999 ರ ಮೇ 8 ರಿಂದ ಜುಲೈ 14 ರವರೆಗೆ ನಡೆದ ಆ 74 ದಿನಗಳು, ದೇಶಾದ್ಯಂತ ಪೂರ್ತಿ ಕಾರ್ಗಿಲ್ ಯುದ್ಧದ್ದೇ ಸುದ್ದಿ. ಮಾಧ್ಯಮಗಳಲ್ಲಿ, ಟಿವಿ ಚಾನೆಲ್ಗಳಲ್ಲಿ ಯುದ್ಧದ ಸುದ್ದಿಗಳಿಗೇ ಆದ್ಯತೆ. ಉಳಿದೆಲ್ಲ ಕಾರ್ಯಕ್ರಮಗಳು ಮೂಲೆಗೆ. ಏನಾಯಿತು ಕಾರ್ಗಿಲ್ನಲ್ಲಿ ? ಇವತ್ತು ಪಾಕ್ ಶತ್ರುಗಳೆಷ್ಟು ಮಂದಿ ಸತ್ತರು ? ಭಾರ...
ಮೋದಿಯವರನ್ನು ಬಿಜೆಪಿಯ ಕೆಲವರೂ ಸೇರಿದಂತೆ ಅನೇಕರು ವಿರೋಧಿಸುತ್ತಿದ್ದಾರೆಂದರೆ ಅವರೊಳಗೆ ಯಾವುದೋ ಭೀತಿ ಮನೆ ಮಾಡಿರಲೇಬೇಕು. ತಮ್ಮ ಸ್ವಾರ್ಥಿ ರಾಜಕಾರಣಕ್ಕೆ, ಸುಳ್ಳುಸೆಟೆಗಳಿಗೆ, ನಾನಾ ಬಗೆಯ ಅಪಸವ್ಯಗಳಿಗೆ ಮೋದಿ ಆಡಳಿತ ಪೂರ್ಣ ವಿರಾಮ ಹಾಕಬಹುದೆಂಬುದೇ ಆ ಭೀತಿ! ಕತ್ತಲೆಯನ್ನೇ ಇಷ್ಟಪಡುವ ಖದೀಮರು ಬೆಳಕನ್ನು ಖಂಡಿತ ಬಯಸಲಾರರು. ಅದರಲ್ಲೂ ಕಣ್ಣು ಚುಚ್ಚುವ ಪ್ರಖರ ಬೆಳಕು ನೋಡಿದೊಡನೆ ಅವರಿಗೆ ಜಂಘಾಬಲವೇ ಉಡುಗಿ ಹೋಗುವುದು ಸ್ವಾಭಾವಿಕ! ನರೇಂದ್ರ ಮೋದಿಯವರ ರಾಜಕೀಯ ವಿರೋಧಿಗಳ ಸಂಖ್ಯೆ ದಿನೇದಿನೇ ಏರತೊಡಗಿದೆಯೆ? ಗೋವಾದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮೋದಿಯವರನ್ನು ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಘೋಷಿಸಿದ ಬಳಿಕ ಈ ಪ್ರಶ್ನೆಗೆ ಇನ್ನಷ್ಟು ಮಹತ್ವ ಬಂದಿದೆ. ಮೋದಿಯವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಘೋಷಿಸಲಾಗುವುದೆಂಬ ವದಂತಿ ಕಾರ್ಯಕಾರಿಣಿ ಸಭೆಗೆ ಮುನ್ನವೇ ಎಲ್ಲೆಡೆ ಹರಡಿತ್ತು. ಮಾಧ್ಯಮಗಳಲ್ಲಿ ಈ ಕುರಿತು ವರದಿಯೂ ಪ್ರಕಟವಾಗಿತ್ತು. ಇದೇ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ಧುರೀಣ, ಮೋದಿಯವರನ್ನು ರಾಷ್ಟ್ರಮಟ್ಟದಲ್ಲಿ ಬೆಳೆಸಿದ ಬಿಜೆಪಿಯ ಭೀಷ್ಮ ಎಲ್.ಕೆ.ಆಡ್ವಾಣಿ ಗೋವಾ ಸಭೆಗೆ ಗೈರು ಹಾಜರಾಗಿದ್ದುದು ಬಿಜೆಪಿಯಲ್ಲಷ್ಟೇ ಅಲ್ಲ, ರಾಷ್ಟ್ರಮಟ್ಟದ ರಾಜಕೀಯದಲ್ಲೂ ಸಂಚಲನ ಮೂಡಿಸಿತ್ತು. ಆಡ್ವಾಣಿ ಗೈರು ಹಾಜರಿಗೆ ಹೊಟ್ಟೆ ನೋವು ಕಾರಣವೆಂದು ಹೇಳಲಾಯಿತಾದರೂ ಅದು ಹೊಟ್ಟೆ ನೋವಲ್ಲ, ಮೋದಿಯ...
Comments
Post a Comment